Monthly archives: March, 2022

“ಜಗದ್ಗುರು ಶ್ರೀಸುಧೀಂದ್ರತೀರ್ಥರು”

‘ಜಗದ್ಗುರು ಶ್ರೀಸುಧೀಂದ್ರತೀರ್ಥರು’ ಶ್ರೀಹಂಸನಾಮಕನ ಸತ್ಪರಂಪರೆಯಲ್ಲಿ, ಶ್ರೀಮನ್ಮಧ್ವಾಚಾರ್ಯರಿಂದ ಹದಿನೈದನೇಯ ಪೀಠಾಧಿಪತಿಗಳಾಗಿ ಶ್ರೀಮನ್ಮಧ್ವಮತವನ್ನು ವಿಶಿಷ್ಟ ಆಯಾಮದಲ್ಲಿ ಪ್ರತಿಷ್ಠಾಪನೆ ಮಾಡಿದವರೇ ಶ್ರೀಸುಧೀಂದ್ರತೀರ್ಥರು.  ಸಕಲವಿದಜನಕುಮುದವನ ಕೌಮುದೀಶರಾದ, ಭಗವಂತನ ವಿಶಿಷ್ಟಕರುಣೆಗೆ ಪಾತ್ರರಾದ, ಶ್ರೀಸುರೇಂದ್ರತೀರ್ಥರೇ ಇವರ ಆಶ್ರಮ ಗುರುಗಳು, ಚತುಷ್ಷಷ್ಟಿಕಲಾಪ್ರಾವೀಣ್ಯದಿಂದ ಆಸ್ತಿಕ್ಯವನ್ನು ಪುಷ್ಟೀಕರಿಸಿದ, ಚತುರಧಿಕಶತಗ್ರಂಥರತ್ನಪ್ರಣೇತರಾದ (104 ಗ್ರಂಥಗಳನ್ನು ಕರುಣಿಸಿದ), ಚಾತುರ್ಯಕ್ಕೆ ಹೆಸರಾದ ಶ್ರೀವಿಜಯೀಂದ್ರತೀರ್ಥ ಗುರುಸಾರ್ವಭೌಮರು ಇವರ ಗುರುಗಳಾದರೇ, ನಾಸ್ತಿಕ್ಯವನ್ನು ಒದ್ದೋಡಿಸಿದ, ಆಸ್ತಿಕರ ಆರಾಧ್ಯರಾದ, ಶ್ರೀಮನ್ಮಧ್ವಮತಸಂವರ್ಧಕರಾದ ಶ್ರೀಮನ್ಮಂತ್ರಾಲಯಪ್ರಭುಗಳು, ಹಾಗೂ ತಪಸ್ವಿಗಳಾದ ಗ್ರಂಥಕಾರರಾದ ಶ್ರೀಯಾದವೇಂದ್ರತೀರ್ಥರು ಇವರ ವಿದ್ಯಾಶಿಷ್ಯರು, ಆಶ್ರಮಶಿಷ್ಯರು. ಇಂತಹ ಲೋಕೋತ್ತರ ಕಾರ್ಯಗಳನ್ನು ಮಾಡಿದ ಗುರುಗಳನ್ನೂ, ಶಿಷ್ಯರನ್ನು ಪಡೆದ …

ಶ್ರೀರಾಘವೇಂದ್ರವಿಜಯದ ಕಣ್ಣಲ್ಲಿ ಶ್ರೀರಾಯರ ಅವತಾರ

ಶ್ರೀರಾಘವೇಂದ್ರವಿಜಯದ ಕಣ್ಣಲ್ಲಿ ಶ್ರೀರಾಯರ ಅವತಾರ ಗುರುಸಾರ್ವಭೌಮರ ವರ್ಧಂತೀ ಮಹೋತ್ಸವ – ಶ್ರೀರಾಯರು ಭೂಲೋಕದಲ್ಲಿ ಅವತರಿಸಿದ ಪುಣ್ಯಪ್ರದ ದಿವಸ. ಇತಿಹಾಸದುದ್ದಕ್ಕೂ ತಮ್ಮ ಪರಾಕ್ರಮ,ಅನೇಕಕಲಾಪ್ರಾವೀಣ್ಯದಿಂದ, ಪಾಂಡಿತ್ಯಾದಿ ಸದ್ಗುಣಗಳಿಂದ ಜಗದ್ವಿಖ್ಯಾತವಾದ ಮನೆತನದಲ್ಲಿ ಸಕ್ಷಾತ್ ಪ್ರಹ್ಲಾದರಾಜರೇ ಅವತರಿಸಿದ ಪರಮಮಂಗಲಕರ ದಿನ. ಶ್ರೀರಾಘವೇಂದ್ರಗುರುಸಾರ್ವಭೌಮರ ದಿವ್ಯವಾದ ಚರಿತ್ರೆಯನ್ನು ತಿಳಿಸುವ ಮಹೋಪಕಾರವನ್ನು ಮಾಡಿದ ನಾರಾಯಣಾಚಾರ್ಯರ ಆಪ್ತತ್ವ, ಈ ಗ್ರಂಥದ ಪ್ರಸ್ತುತಿಯ ಹಿನ್ನೆಲೆ, ಆ ಗ್ರಂಥದಲ್ಲಿ ಪ್ರತಿಪಾದಿತವಾಗಿರುವ ಮಧ್ವವಿಜಯದ ಪ್ರತಿಬಿಂಬತ್ವ ಇವೆಲ್ಲವೂ ಶ್ರೀರಾಘವೇಂದ್ರವಿಜಯದ ಪರಮಪ್ರಾಮಾಣಿಕತ್ವವನ್ನು, ಶ್ರೆಷ್ಠತ್ವವನ್ನು ತಿಳಿಸುವ ಪ್ರಮುಖ ವಿಚಾರಗಳು. ಶ್ರೀರಾಘವೇಂದ್ರಗುರುರಾಜರೇ ಇದನ್ನು ಪರಿಶೀಲಿಸಿ ಪ್ರಮಾಣೀಕರಿಸಿರುವದರಿಂದ ಇದರ ಮೌಲ್ಯ …

ಶ್ರೀರಾಘವೇಂದ್ರವಿಜಯ ಉಲ್ಲೇಖಿಸುವ ಶ್ರೀರಾಘವೇಂದ್ರತೀರ್ಥರ ಪಟ್ಟಾಭಿಷೇಕ.

ಶ್ರೀರಾಘವೇಂದ್ರವಿಜಯ ಉಲ್ಲೇಖಿಸುವ ಶ್ರೀರಾಘವೇಂದ್ರತೀರ್ಥರ ಪಟ್ಟಾಭಿಷೇಕ. ಇಂತಹ ವಿದ್ವಾಂಸರಾದ ಶ್ರೇಷ್ಠಕರ್ತೃಗಳಿಂದ ರಚಿತವಾದ, ಸಕಲ ಸಲ್ಲಕ್ಷಣಗಳಿಂದ ಉಪೇತವಾದ ಈ ಮಹಾಕಾವ್ಯವು ಸಜ್ಜನರಿಗೆ ಅತ್ಯಂತ ಗ್ರಾಹ್ಯವಾಗಿದೆ. ಶೈಲಿ, ಪ್ರೌಢಿಮೆ, ವಿಷಯನಿರೂಪಣೆ, ಕಾವ್ಯಲಕ್ಷಣಗಳಲ್ಲಿ ಇದು ಶ್ರೀಸುಮಧ್ವವಿಜಯವನ್ನೇ ಹೋಲುತ್ತದೆ. ಶ್ರೀಸುಮಧ್ವವಿಜಯದ ಕರ್ತೃಗಳಾದ ಶ್ರೀನಾರಾಯಣಪಂಡಿತಾಚಾರ್ಯರೇ ಈ ಮಹಾಕಾವ್ಯರಚನೆಗೆ ಸ್ಫೂರ್ತಿ ಎನ್ನುವುದು ಎಂದು ಶ್ರೀರಾಘವೇಂದ್ರವಿಜಯ ಕರ್ತೃಗಳಾದ ನಾರಾಯಣಾಚಾರ್ಯರ ಮಾತುಗಳಿಂದಲೇ ತಿಳಿಯಬಹುದು.ಅಂತೆಯೇ ಶ್ರೀಸುಮಧ್ವವಿಜಯದ ಪಾರಾಯಣ-ಪ್ರವಚನಗಳು ಸಕಲ ಐಹಿಕ-ಪಾರಮಾರ್ಥಿಕ ಸಂಪತ್ತನ್ನು ಕರುಣಿಸುವಂತೆ, ಶ್ರೀರಾಘವೇಂದ್ರವಿಜಯವೂ ಈ ವಿಷಯದಲ್ಲಿ ಸಮರ್ಥವಾಗಿದೆ ಎನ್ನುವುದರಲ್ಲಿ ಲೇಶಸಂಶಯವೂ ಇಲ್ಲ. ಈ ರೀತಿ ಶ್ರೀರಾಘವೇಂದ್ರ ಗುರುಗಳ ಪೂರ್ವಾಶ್ರಮಜೀವನ, ಯತ್ಯಾಶ್ರಮಜೀವನವನ್ನು …